⚡ಟ್ರೆಂಡಿಂಗ್

ಚಂಪತ್ ರಾಯ್ ರಾಜೀನಾಮೆ ಕೊಟ್ಟಿಲ್ಲ: ವದಂತಿಗಳಿಗೆ ಪೇಜಾವರ ಶ್ರೀ ಸ್ಪಷ್ಟನೆ

ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳ ನಡುವೆ, ಉಡುಪಿಯ ಅದೂಕ್ಷ ಮಠದ ಪೇಜಾವರ ಶ್ರೀಗಳು ಮಹತ್ವದ ಸ್ಪಷ್ಟನೆ ನೀಡಿದ್ದಾರೆ.
ಪೇಜಾವರ ಶ್ರೀಗಳು ಮಾತನಾಡಿ, "ನಮ್ಮ ರಾಮಮಂದಿರ ಟ್ರಸ್ಟ್‌ನ ವಾಟ್ಸ್ಯಾಪ್ ಗುಂಪಿನಲ್ಲಿ ಚಂಪತ್ ರಾಯ್ ಅವರು ತಮ್ಮ ರಾಜೀನಾಮೆ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಅಂತಹ ಯಾವುದೇ ಸಂದೇಶವನ್ನು ಅವರು ನಮ್ಮೊಂದಿಗೆ ಹಂಚಿಕೊಂಡಿಲ್ಲ" ಎಂದು ತಿಳಿಸಿದ್ದಾರೆ.

ಈ ಮೂಲಕ ಚಂಪತ್ ರಾಯ್ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಯಾವುದೇ ಅಧಿಕೃತ ದೃಢೀಕರಣ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಾಮಮಂದಿರ ಟ್ರಸ್ಟ್‌ನಿಂದಲೂ ಈವರೆಗೆ ಚಂಪತ್ ರಾಯ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯನ್ನು ನಂಬಬಾರದು ಎಂದು ಮೂಲಗಳು ತಿಳಿಸಿವೆ.
ಮುಖ್ಯಾಂಶಗಳು:

ಚಂಪತ್ ರಾಯ್ ರಾಜೀನಾಮೆ ಕುರಿತು ಅಧಿಕೃತ ಮಾಹಿತಿ ಇಲ್ಲ.

ಟ್ರಸ್ಟ್‌ನ ವಾಟ್ಸ್ಯಾಪ್ ಗುಂಪಿನಲ್ಲಿ ಯಾವುದೇ ಸಂದೇಶ ಹಂಚಿಕೆಯಾಗಿಲ್ಲ.

ಪೇಜಾವರ ಶ್ರೀಗಳು ವದಂತಿಗಳನ್ನು ತಳ್ಳಿಹಾಕಿದ್ದಾರೆ.

ರಾಮಮಂದಿರ ಟ್ರಸ್ಟ್‌ನಿಂದಲೂ ಅಧಿಕೃತ ಪ್ರಕಟಣೆ ಇನ್ನೂ ಹೊರಬಂದಿಲ್ಲ.

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...