ಉತ್ತರ ಪ್ರದೇಶದ ಮಹೋಬಾದಲ್ಲಿ ಡಿಎಸ್ಪಿ ರವಿಕಾಂತ್ ಗೌಡ ಅವರು ಎತ್ತಿನಗಾಡಿ ಓಡಿಸುವ ಮೂಲಕ ಜನರ ಗಮನ ಸೆಳೆದಿದ್ದಾರೆ. ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆ ಹಿನ್ನೆಲೆಯಲ್ಲಿ ಅವರು ಈ ರೀತಿಯಾಗಿ ಜಾಗೃತಿ ಮೂಡಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂಬ ಸಂದೇಶದೊಂದಿಗೆ ರವಿಕಾಂತ್ ಗೌಡ ಅವರು ಎತ್ತಿನಗಾಡಿಯಲ್ಲಿ ಸಂಚರಿಸಿದರು. ಅಧಿಕಾರಿಯ ಈ ವಿಭಿನ್ನ ಪ್ರಯತ್ನ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
“ಅಗತ್ಯವಿದ್ದಷ್ಟೇ ಇಂಧನ ಬಳಸಿ, ದೇಶದ ಸಂಪನ್ಮೂಲ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ” ಎಂಬ ಸಂದೇಶವನ್ನು ಅವರು ಸಾರಿದರು.
ಪೊಲೀಸ್ ಅಧಿಕಾರಿಯೊಬ್ಬರು ಸ್ವತಃ ಸರಳ ಮಾರ್ಗ ಅನುಸರಿಸಿ ಜನರಿಗೆ ಮಾದರಿಯಾಗಿರುವುದು ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆಗೆ ಕಾರಣವಾಗಿದೆ.
Post a Comment