ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಡಿ.ಕೆ. ಹರಿಪ್ರಸಾದ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಪಕ್ಷ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯ ರಾಜಕೀಯದಲ್ಲಿ ದೀರ್ಘ ಅನುಭವ ಹೊಂದಿರುವ ಡಿ.ಕೆ. ಹರಿಪ್ರಸಾದ ಅವರು ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
ಮುಂಬರುವ ಚುನಾವಣೆಗಳು ಹಾಗೂ ಪಕ್ಷದ ಸಂಘಟನೆ ದೃಷ್ಟಿಯಿಂದ ಅವರಿಗೆ ಕೆಪಿಸಿಸಿ ಜವಾಬ್ದಾರಿ ನೀಡಲಾಗಿದೆ. ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ನೂತನ ಅಧ್ಯಕ್ಷರಿಗೆ ಶುಭಾಶಯಗಳು ಹರಿದು ಬರುತ್ತಿವೆ.
Post a Comment