ಬೆಂಗಳೂರು, ಜೂನ್ 04: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆ ಅಧಿಕೃತವಾಗಿ ಪ್ರಕಟಗೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ಸಲಹೆಯ ಮೇರೆಗೆ ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.
ಖಾತೆ ಹಂಚಿಕೆಯ ವಿವರ:
• ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – ಹಣಕಾಸು, ಸಚಿವ ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಹಾಗೂ ಹಂಚಿಕೆಯಾಗದ ಎಲ್ಲಾ ಖಾತೆಗಳು.
• ಡಾ. ಜಿ. ಪರಮೇಶ್ವರ (ಉಪ ಮುಖ್ಯಮಂತ್ರಿ) – ಕಂದಾಯ ಮತ್ತು ಕ್ರೀಡಾ ಇಲಾಖೆ.
• ಕೆ.ಹೆಚ್. ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರ.
• ಕೆ.ಜೆ. ಜಾರ್ಜ್ – ಇಂಧನ ಮತ್ತು ಪ್ರವಾಸೋದ್ಯಮ.
• ಎಂ.ಬಿ. ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ.
• ರಾಮಲಿಂಗಾ ರೆಡ್ಡಿ – ಬೃಹತ್ ಮತ್ತು ಮಧ್ಯಮ ನೀರಾವರಿ.
• ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ.
• ಕೃಷ್ಣ ಬೈರೇಗೌಡ – ಗ್ರೇಟರ್ ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಸಂಬಂಧಿತ ಜವಾಬ್ದಾರಿಗಳು, BWSSB, BMRCL.
• ಪ್ರಿಯಾಂಕ್ ಖರ್ಗೆ – ಗೃಹ ಇಲಾಖೆ (ಗುಪ್ತಚರ ಹೊರತುಪಡಿಸಿ), ಐಟಿ & ಬಿಟಿ, ಇ-ಆಡಳಿತ.
• ಯು.ಟಿ. ಖಾದರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ.
• ಈಶ್ವರ ಖಂಡ್ರೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್.
• ಡಾ. ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ಧಿ ಸಂಬಂಧಿತ ಇಲಾಖೆಗಳು.
• ಭೈರತಿ ಸುರೇಶ್ – ಸಾರಿಗೆ ಇಲಾಖೆ.
• ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ.
ಸಚಿವರಿಗೆ ಖಾತೆ ಹಂಚಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ನ್ಯೂ ವಿಜಯ ನ್ಯೂಸ್ | ಬೆಂಗಳೂರು
Post a Comment