ದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಯುವಕರ ಬೆಂಬಲ ಪಡೆದು ವೈರಲ್ ಆಗಿರುವ ಯುವ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ಮೊದಲ ಅಧಿಕೃತ ಪತ್ರಿಕಾಗೋಷ್ಠಿಯನ್ನು ದೆಹಲಿಯಲ್ಲಿ ನಡೆಸಿದ್ದು, ಚಳವಳಿಗೆ ಮಹತ್ವದ ತಿರುವು ಸಿಕ್ಕಿದೆ.
ಪತ್ರಿಕಾಗೋಷ್ಠಿಯಲ್ಲಿ CJP ನಾಯಕರು NEET, CBSE ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಅಗತ್ಯ ಎಂಬ ವಿಷಯಗಳನ್ನು ಪ್ರಸ್ತಾಪಿಸಿದರು. ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಜೂನ್ 6ರಂದು ದೆಹಲಿಯಲ್ಲಿ ತಮ್ಮ ಮೊದಲ ಬೀದಿ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ನಾಯಕರು ಘೋಷಿಸಿದರು. ಶಿಕ್ಷಣ, ಉದ್ಯೋಗ ಮತ್ತು ವ್ಯವಸ್ಥೆಯ ಹೊಣೆಗಾರಿಕೆ ಕುರಿತಾಗಿ ಯುವಜನರ ಧ್ವನಿಯನ್ನು ಎತ್ತುವುದು ತಮ್ಮ ಉದ್ದೇಶ ಎಂದು CJP ತಿಳಿಸಿದೆ.
CJP ಸ್ಥಾಪಕ ಅಭಿಜೀತ್ ದಿಪ್ಕೆ ಅವರು ಅಮೆರಿಕದಿಂದ ಭಾರತಕ್ಕೆ ಬಂದು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಜನಪ್ರಿಯವಾಗುತ್ತಿರುವ ಈ ಚಳವಳಿ, ಯುವ ಸಮುದಾಯದ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನಗಳಲ್ಲಿ ಇನ್ನಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.
Post a Comment